ಬೆಳಗಾವಿ: ಕಳಸಾ-ಬಂಡೂರಿ ಯೋಜನೆಗೆ ಅನುಮೋದನೆ ನೀಡುವ ಮೂಲಕ ಬಿಜೆಪಿ ಸರ್ಕಾರ, ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದೆ.

ಹೌದು ಜನವರಿ 2, 2023 ರಂದು ಕಳಸಾ-ಬಂಡೂರಿ ಯೋಜನೆ ಸಂಬಂಧ ಬೃಹತ್ ಸಮಾವೇಶ ಏರ್ಪಡಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಈ ಸಮಾವೇಶದಲ್ಲಿ ಕಳಸಾ-ಬಂಡೂರಿ ಯೋಜನೆ ವಿಚಾರ ಮುಂದಿಟ್ಟುಕೊಂಡು ಉತ್ತರ ಕರ್ನಾಟಕದ ಮತ ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿತ್ತು.

ಆದ್ರೆ ಸಮಾವೇಶಕ್ಕೂ ಮೊದಲೇ ಕಳಸಾ-ಬಂಡೂರಿ ಯೋಜನೆಗೆ ಹಸಿರು ನಿಶಾನೆ ತೋರಿಸೊ ಮೂಲಕ ಬಿಜೆಪಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದು, ಇದೀಗ ಸಮಾವೇಶದ ವಿಚಾರವಾಗಿ ಕಾಂಗ್ರೆಸ್ ನಾಯಕರ ಮುಂದಿನ ನಡೆ ಏನೆಂದು ಕಾದು ನೋಡಬೇಕಿದೆ.