ಬೆಳಗಾವಿ: ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ರು.

ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರೈತರ ಬಹು ವರ್ಷಗಳ ಹೋರಾಟಕ್ಕೆ ಈಗ ಪ್ರತಿಫಲ ಸಿಕ್ಕಿದೆ. ಕಳಸಾ-ಬಂಡೂರಿ ಕುರಿತು ವಿಸ್ತೃತ ವರದಿ ಸಲ್ಲಿಸಲು ಕೇಂದ್ರ ಜಲಸಂಪನ್ಮೂಲ ಸಚಿವಾಲಯದಿಂದ ಅನುಮೋದನೆ ದೊರೆತಿದೆ ಎಂದರು.

ಕಳಸಾ-ಬಂಡೂರಿ ಹೋರಾಟ ನಮ್ಮ ತಂದೆಯವರ ಕಾಲದಿಂದಲೂ ನಡೆದುಕೊಂಡು ಬಂದಿದೆ. ನಮ್ಮ ತಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕಳಸಾ-ಬಂಡೂರಿ ಯೋಜನೆ ವಿಚಾರಕ್ಕೆ ಸಭೆ ನಡೆದಿತ್ತು. ಆಗ ಮಹಾರಾಷ್ಟ್ರದಲ್ಲಿ ನಾರಾಯಣ ರಾಣೆ ಅವರು ಮುಖ್ಯಮಂತ್ರಿ ಆಗಿದ್ದರು ಎಂದು ಕಳಸಾ-ಬಂಡೂರಿ ಹೋರಾಟದ ಹಳೆ ದಿನಗಳನ್ನು ಮೆಲುಕು ಹಾಕಿದರು.