ಬೆಂಗಳೂರು: 2023 ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ದಿನ ಬಸವನಗುಡಿಯ ಗವಿಗಂಗಾಧರೇಶ್ವರನನ್ನ ಸೂರ್ಯ ರಶ್ಮಿ ಸ್ಪರ್ಶಿಸಲಿದೆ.

ಇಂದು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ತನ್ನ ಪಥ ಬದಲಾಯಿಸುತ್ತಾನೆ. ಸಂಜೆ 5:17 ರಿಂದ 5:37ರ ನಡುವೆ ಸೂರ್ಯನ ಕಿರಣಗಳು 30 ರಿಂದ 40 ಸೆಕೆಂಡ್ ಗಳ ಕಾಲ ಗವಿಗಂಗಾಧರೇಶ್ವರ ‌‌ಸ್ವಾಮಿಯನ್ನು ಸ್ಪರ್ಶಿಸಲಿದೆ.

ಪ್ರತಿ ವರ್ಷ ಸಂಕ್ರಾಂತಿಯಂದು ಪ್ರಕೃತಿಯ ಈ ವಿಸ್ಮಯದ ವೀಕ್ಷಣೆಗೆ ಭಕ್ತರು ಕಾತುರದಿಂದ ಕಾಯುತ್ತಿರುತ್ತಾರೆ. ಮೊದಲು ನಂದಿ ಮೇಲೆ ಹಾದುಹೋಗುವ ಈ ಸೂರ್ಯನ ಕಿರಣಗಳು ನಂತರ ಪಾಣಿ ಪೀಠದ ಮೂಲಕ ಶಿವಲಿಂಗವನ್ನು ಸ್ಪರ್ಶಿಸಲಿವೆ.

ಇನ್ನು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗುತ್ತೆ. ಹೀಗಾಗಿ ಭಕ್ತರಿಗೆ ಈ ವಿಸ್ಮಯ ಕಣ್ತುಂಬಿಸಿಕೊಳ್ಳಲು ದೇವಸ್ಥಾನದ ಹೊರ ಭಾಗದಲ್ಲಿ ಎಲ್‌ಇಡಿ ಸ್ಕ್ರೀನ್‌ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ಟೆಂಟ್, ಶಾಮಿಯಾನದ ವ್ಯವಸ್ಥೆಯನ್ನೂ ಮಾಡಲಾಗಿದೆ.