ಬೆಂಗಳೂರು: ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸ್ಯಾಂಟ್ರೋ ರವಿಯನ್ನು ಗುಜರಾತ್ ನ ಅಹ್ಮದಾಬಾದ್ ನಲ್ಲಿ ಕರ್ನಾಟಕದ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಮಹಿಳೆಯನ್ನ ಮದುವೆಯಾಗಿ ವಂಚಿಸಿರುವುದು, ಲೈಂಗಿಕ ದೌರ್ಜನ್ಯ, ಅಕ್ರಮ ವರ್ಗಾವಣೆ, ಲೇವಾದೇವಿ, ವೇಶ್ಯಾವಾಟಿಕೆ ದಂಧೆ ಹೀಗೆ ಬರೊಬ್ಬರಿ 28 ಪ್ರಕರಣಗಳ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಲೋಕ್ ಕುಮಾರ್, ಸ್ಯಾಂಟೋ ರವಿ ಜೊತೆ ಸತೀಶ್ ಹಾಗೂ ರಾಮ್ ಜೀ ಎಂಬುವವರನ್ನು ಕೂಡ ಅರೆಸ್ಟ್ ಮಾಡಲಾಗಿದೆ. ಈ ಮೂವರು ಆರೋಪಿಗಳನ್ನು ತಕ್ಷಣ ಸ್ಥಳೀಯ ಕೋರ್ಟ್ ಗೆ ಹಾಜರು ಪಡಿಸಲಾಗುವುದು.

ಬಳಿಕ ಅಲ್ಲಿಂದ ಆರೋಪಿಗಳನ್ನು ಕರ್ನಾಟಕಕ್ಕೆ ಕರೆತರಲಾಗುವುದು ‌‌ಎಂದು ತಿಳಿಸಿದ್ರು. ಇದೇ ವೇಳೆ ರಾಯಚೂರು ಎಸ್ಪಿ, ಮಂಡ್ಯ ಎಸ್ಪಿ, ರಾಮನಗರ ಎಸ್ಪಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಅಲೋಕ್ ಕುಮಾರ್ ಶ್ಲಾಘಿಸಿದ್ದಾರೆ.