‌ಸವದತ್ತಿ: ವ್ಯಾಪಾರಿಯೊಬ್ಬರನ್ನು ಕಿಡ್ನ್ಯಾಪ್ ಮಾಡಿ, ಅವರಿಂದ ಹಣ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

1ವಾರದ ಹಿಂದೆ ವ್ಯಾಪಾರಿಯೊಬ್ಬರನ್ನು ಕಿಡ್ನ್ಯಾಪ್ ಮಾಡಿ ಅವರಿಂದ 1ಲಕ್ಷ ಹಣ ಸುಲಿಗೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು. ಈ ಪ್ರಕರಣ ಮುರುಗೋಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ರಾಮದುರ್ಗದ ಡಿ.ಎಸ್.ಪಿ ರಾಮನಗೌಡ ಹಟ್ಟಿ ನೇತೃತ್ವದಲ್ಲಿ ಮುರುಗೋಡ ಠಾಣೆಯ ಪಿಐ ಮೌನೇಶ್ವರ ಮಾಲಿಪಾಟೀಲ, ಪಿಎಸ್ಐ ಬಸನಗೌಡ ನೇರ್ಲಿ, ಲಕ್ಷ್ಮೀ ಬಿರಾದಾರ ಹಾಗೂ ಸಿಬ್ಬಂದಿ ಈ ಕೇಸ್ ಭೇದಿಸಲು ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 60ಸಾವಿರ ನಗದು,1 ಚಾಕು, 6 ಮೊಬೈಲ್ ಫೋನ್, 5 ಲಕ್ಷ ಮೌಲ್ಯದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.