ಕರ್ನಾಟಕ ವಾರ್ತೆ: ಮೀನುಗಾರಿಕೆ ಇಲಾಖೆಯಿಂದ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿಗೆ ಹೊಸದಾಗಿ ಮೀನು ಕೃಷಿಕೊಳ ನಿರ್ಮಾಣ, ಮೀನು ಮರಿ ಉತ್ಪಾದನೆ, ಪಾಲನೆ ಕೇಂದ್ರಗಳ ಸ್ಥಾಪನೆ, ಇತರೆ ಚಟುವಟಿಕೆಗಳಾದ ಆರ್.ಎ.ಎಸ್, ಬಯೋಪ್ಲಾಕ್ ಘಟಕಗಳ ನಿರ್ಮಾಣ, ತಾಜಾ ಮೀನು ಮಾರಾಟ ಕೇಂದ್ರಗಳ ಸ್ಥಾಪನೆ, ಶೈತಿಕರಿಸಿದ ಶಾಖ ನಿರೋಧಕ ವಾಹನ ಖರೀದಿ, ಶೈತ್ಯಾಗಾರ, ಮಂಜುಗಡ್ಡೆ ಸ್ಥಾವರ ನಿರ್ಮಾಣಗಳಿಗೆ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 15 ಆಗಿದೆ. ಆಸಕ್ತ ಮೀನುಗಾರರು, ಮೀನು ಕೃಷಿಕ ಫಲಾನುಭವಿಗಳು ಸಂಬಂದಪಟ್ಟ ತಾಲೂಕಾ ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರು, ಸೆಕ್ಟರ ನಂ.35 ನವನಗರ, ಬಾಗಲಕೋಟೆ (9986132717), ಸಹಾಯಕ ನಿರ್ದೇಶಕರು, ಜಮಖಂಡಿ (9886820761)ಸಹಾಯಕ ನಿರ್ದೇಶಕರು, ಬಾದಾಮಿ (9902203684) ಇವರನ್ನು ಸಂಪರ್ಕಿಸಬಹುದಾಗಿದೆ.