
ಕರ್ನಾಟಕ ವಾರ್ತೆ: ಮೀನುಗಾರಿಕೆ ಇಲಾಖೆಯಿಂದ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿಗೆ ಹೊಸದಾಗಿ ಮೀನು ಕೃಷಿಕೊಳ ನಿರ್ಮಾಣ, ಮೀನು ಮರಿ ಉತ್ಪಾದನೆ, ಪಾಲನೆ ಕೇಂದ್ರಗಳ ಸ್ಥಾಪನೆ, ಇತರೆ ಚಟುವಟಿಕೆಗಳಾದ ಆರ್.ಎ.ಎಸ್, ಬಯೋಪ್ಲಾಕ್ ಘಟಕಗಳ ನಿರ್ಮಾಣ, ತಾಜಾ ಮೀನು ಮಾರಾಟ ಕೇಂದ್ರಗಳ ಸ್ಥಾಪನೆ, ಶೈತಿಕರಿಸಿದ ಶಾಖ ನಿರೋಧಕ ವಾಹನ ಖರೀದಿ, ಶೈತ್ಯಾಗಾರ, ಮಂಜುಗಡ್ಡೆ ಸ್ಥಾವರ ನಿರ್ಮಾಣಗಳಿಗೆ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 15 ಆಗಿದೆ. ಆಸಕ್ತ ಮೀನುಗಾರರು, ಮೀನು ಕೃಷಿಕ ಫಲಾನುಭವಿಗಳು ಸಂಬಂದಪಟ್ಟ ತಾಲೂಕಾ ಮೀನುಗಾರಿಕೆ ಸಹಾಯಕ ನಿರ್ದೇಶಕ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರು, ಸೆಕ್ಟರ ನಂ.35 ನವನಗರ, ಬಾಗಲಕೋಟೆ (9986132717), ಸಹಾಯಕ ನಿರ್ದೇಶಕರು, ಜಮಖಂಡಿ (9886820761)ಸಹಾಯಕ ನಿರ್ದೇಶಕರು, ಬಾದಾಮಿ (9902203684) ಇವರನ್ನು ಸಂಪರ್ಕಿಸಬಹುದಾಗಿದೆ.
ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…
PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…
ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…
ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…
ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…