Categories: Viral Check

ನೌಕರರ ನಿವೃತ್ತಿ ವಯಸ್ಸು 50 ವರ್ಷಕ್ಕೆ ಇಳಿಕೆ ಸುಳ್ಳು: ಕೇಂದ್ರ ಸರ್ಕಾರ ಹೇಳಿದ್ದೇನು?

ಕೊರೊನಾದಿಂದ ಲಾಕ್ ಡೌನ್ ಆದ ಬಳಿಕ ಸರಕಾರಿ ನೌಕರರ ಕುರಿತು ಅನೇಕ ಸುದ್ದಿಗಳು ಹೊರಬೀಳುತ್ತಿವೆ. ಸರಕಾರಿ ನೌಕರರ ವೇತನ ಕಡಿತ ಆಗುತ್ತದೆ. ವೇತನ ಬಡ್ತಿ ಕೊಡುವುದಿಲ್ಲ ಹೀಗೆ ಅನೇಕ ಸುದ್ದಿಗಳು ಹರಿದಾಡುತ್ತಿದ್ದವು. ಅದರ ನಡುವೆಯೇ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಸುದ್ದಿ ಭಾರೀ ವೈರಲ್ ಆಗುತ್ತಿದೆ. ಕೊರೊನಾ ಕಾರಣಕ್ಕೆ ಸರಕಾರಿ ನೌಕರರ ನಿವೃತ್ತಿ ವಯಸ್ಸನ್ನು 50 ವರ್ಷಕ್ಕೆ ಇಳಿಸಲಾಗುತ್ತಿದೆ ಎಂದು ವಾಟ್ಸಾಪ್ ಗಳಲ್ಲಿ ಸಂದೇಶ ಹರಿದಾಡುತ್ತಿದೆ.

ಇದೇ ಸಂದೇಶ ಆಧರಿಸಿ ಕೆಲವು ಸುದ್ದಿ ಸಂಸ್ಥೆಗಳು ವರದಿಯನ್ನೂ ಮಾಡಿವೆ. ಕೊರೊನಾ ವೈರಸ್ ಕಾರಣಕ್ಕೆ ನಿವೃತ್ತಿ ವಯಸ್ಸು 50 ವರ್ಷಕ್ಕೆ ಇಳಿಸಲಾಗುತ್ತಿದೆ. ನಿವೃತ್ತರಾದ ಪ್ರತಿಯೊಬ್ಬರಿಗೂ ಅಂದಿನಿಂದಲೇ ನಿವೃತ್ತಿ ಸೌಲಭ್ಯಗಳು ಜಾರಿಯಾಗಲಿವೆ. ಆದರೆ, ಅದು ಕೊರೊನಾ ಬಿಕ್ಕಟ್ಟು ಮುಗಿದ ಬಳಿಕ ಸೌಲಭ್ಯಗಳು ಸಿಗಲಿವೆ. ಕೊರೊನಾದಿಂದ ಎದುರಾಗಿರುವ ಆರ್ಥಿಕ ಸಂಕಷ್ಟದಿಂದ ಕೇಂದ್ರ ಸರ್ಕಾರ ನೌಕರರ ನಿವೃತ್ತಿ ವಯಸ್ಸು ಇಳಿಸುವ ಒತ್ತಡಕ್ಕೆ ಸಿಲುಕಿದೆ ಎಂದು ವರದಿ ಮಾಡಿವೆ.

ಅಲ್ಲದೆ, ನಿವೃತ್ತಿ ವಯಸ್ಸು ಇಳಿಸಲು ಸಾಮಾಜಿಕ ಅಂತರ ಕಾಪಾಡುವುದು ಸಹ ಕಾರಣವಾಗಿದೆ ಎಂದು ಹೇಳಿವೆ. ಕೊರೊನಾ 2022ರವರೆಗೆ ಬಾಧಿಸಲಿದೆ. ಅಲ್ಲಿಯವರೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹಾರ್ವರ್ಡ್ ಯುನಿವರ್ಸಿಟಿ ವಿಜ್ಞಾನಿಯೊಬ್ಬರು ಹೇಳಿದ್ದಾರೆ. ಆ ಪ್ರಕಾರ ಕಚೇರಿಗಳಲ್ಲಿ ಉದ್ಯೋಗಿಗಳ ಸಂಖ್ಯೆ ಹೆಚ್ಚಾಗಿ ಒಬ್ಬರ ನಡುವೆ ಸಂಪರ್ಕ ಏರ್ಪಟ್ಟರೆ ಸಮಸ್ಯೆ ಆಗಲಿದೆ. ಹಾಗಾಗಿ ಮೇಲಿನ ನಿರ್ಧಾನ ಕೈಗೊಳ್ಳಲಾಗಿದೆ ಎಂದು ಇಂಗ್ಲಿಷ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೇಂದ್ರ ಸರ್ಕಾರ ಹೇಳಿದ್ದೇನು?
ನಿವೃತ್ತಿ ವಯಸ್ಸು 50ಕ್ಕೆ ಇಳಿಸಲಾಗಿದೆ ಎಂದು ವಾಟ್ಸಾಪ್ ಸಂದೇಶ ಮತ್ತು ಸುದ್ದಿ ಸಂಸ್ಥೆಯ ವರದಿ ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸರಕಾರಿ ನೌಕರರ ನಿವೃತ್ತಿ ವಯಸ್ಸನ್ನು 50 ವರ್ಷಕ್ಕೆ ಇಳಿಸುವ ನಿರ್ಧಾರ ಅಥವಾ ಆ ಕುರಿತು ಚರ್ಚೆಯೇ ಸರ್ಕಾರದ ಮಟ್ಟದಲ್ಲಿ ನಡೆದಿಲ್ಲ. ಅಂಥ ವಿಚಾರವೂ ಪ್ರಸ್ತಾಪವಾಗಿಲ್ಲ ಎಂದು ಕೇಂದ್ರ ಸರ್ಕಾರದ ಅಧೀನ ಸಂಸ್ಥೆ ಪ್ರೆಸ್ ಇನ್ಫಾರ್ಮೇಷನ್ ಬ್ಯುರೊ ತಿಳಿಸಿದೆ. ತನ್ನ ಫ್ಯಾಕ್ಟ್ ಚೆಕ್ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಸಹ ಮಾಡಿದೆ. ಸದ್ಯ ಭಾರತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ಇದೆ.

admin

View Comments

Recent Posts

ರೈತನ ಬಾಳಲ್ಲಿ ಜೀವಜಲ ತುಂಬಿದ ರಿಂಗ್ ಮಾಸ್ಟರ್ ನರೇಗಾ

ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…

3 months ago

PMAY: ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಅರ್ಜಿ

PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…

1 year ago

ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…

2 years ago

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

2 years ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

3 years ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

3 years ago