Categories: NewsUttara kannada

ಉತ್ತರ ಕನ್ನಡ ಜಿಲ್ಲೆಯ ಮೊದಲ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಆರಂಭ

ಅಂಕೋಲಾ ತಾಲೂಕಿನಲ್ಲಿ 93 ಎಕರೆ ಭೂಸ್ವಾಧೀನಕ್ಕೆ ಜಿಲ್ಲಾಧಿಕಾರಿ ಆದೇಶ: ಮೊದಲ ಹಂತದಲ್ಲಿ 7.88 ಕೋಟಿ ರೂ. ಬಿಡುಗಡೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಈಗಾಗಲೇ ಗೊತ್ತು ಮಾಡಿರುವ ಅಂಕೋಲಾ ತಾಲೂಕಿನ ಅಲಗೇರಿ ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 93 ಎಕರೆ ಜಾಗವನ್ನು ಭೂಸ್ವಾಧೀನ ಪಡಿಸಿಕೊಳ್ಳಲು 7.88 ಕೋಟಿ ರೂ. ಗಳನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಲಾಗಿದೆ.

ಭಾರತದ ಅತೀ ದೊಡ್ಡ ನೌಕಾನೆಲೆಯಾಗಿರುವ ಕಾರವಾರ-ಅಂಕೋಲಾ ಭಾಗದಲ್ಲಿರುವ ಐಎನ್ಎಸ್ ಕದಂಬ ನೌಕಾನೆಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಈ ಮೊದಲೇ ರಕ್ಷಣಾ ಇಲಾಖೆ ಕ್ರಮ ವಹಿಸಿತ್ತು. ಈ ವಾಯುನೆಲೆಗೆ ತಕ್ಕಂತೆ ಅವಶ್ಯಕ ಜಮೀನು ಇಲಾಖೆಯ ಬಳಿ ಇತ್ತು.

ಆ ಮಧ್ಯೆ ಇದೇ ವಾಯುನೆಲೆಯನ್ನು ನಾಗರಿಕ ವಿಮಾನ ನಿಲ್ದಾಣಕ್ಕಾಗಿಯೂ ಬಳಸಲು ರಾಜ್ಯ ಸರಕಾರ ತೀರ್ಮಾನಿಸಿತ್ತು. ಹೀಗಾಗಿ ಇದಕ್ಕೆ ರಕ್ಷಣಾ ಇಲಾಖೆಯು ಒಪ್ಪಿ ಹೆಚ್ಚುವರಿ ಭೂಪ್ರದೇಶದ ಅವಶ್ಯಕತೆ ಇದ್ದು ಅದನ್ನು ನೀಡಿದರೆ ನಾಗರಿಕ ವಿಮಾನ ನಿಲ್ದಾಣ ಸಾಧ್ಯ ಎಂದು ಹೇಳಿತ್ತು.

ಅದರಂತೆ ವಾಯುನೆಲೆ ನಿರ್ಮಿಸಲು ಉದ್ದೇಶಿಸಿದ್ದ ಅಂಕೋಲಾ ತಾಲೂಕಿನ ಅಲಗೇರಿ ಬಳಿಯ ನೌಸೇನಾ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಭೂಸ್ವಾಧೀನ ಪಡಿಸಿಕೊಳ್ಳಲು ನಿಶ್ಚಯಿಸಲಾಗಿತ್ತು. ಈ ಬಗ್ಗೆ ಅಲಗೇರಿ ಗ್ರಾಮದಲ್ಲಿ ಸರ್ವೇ ಮಾಡಿ ಬಳಿಕ ಅಧಿಕಾರಿಗಳ ತಂಡ ಹಾಗೂ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇನ್ನು ಆಗಸ್ಟ್ ನಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಸಚಿವ ಸಂಪುಟದ ಒಪ್ಪಿಗೆಯೂ ದೊರೆತಿತ್ತು. ಇದೀಗ ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದ್ದು ಈ ಕುರಿತು ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಅದರಂತೆ ಅಂಕೋಲಾ ತಾಲೂಕಿನ ಅಲಗೇರಿ ಗ್ರಾಮದ 70 ಎಕರೆ, ಬೆಲೇಕೆರಿ ಗ್ರಮದ 21 ಎಕರೆ ಹಾಗೂ ಭಾವಿಕೆರಿ ಗ್ರಾಮದ ಮೂರುವರೆ ಎಕರೆ ಪ್ರದೇಶವನ್ನು ಸ್ವಾಧೀನ ಪಡಿಸಿಕೊಳ್ಳಲು ಜಿಲ್ಲಾದಿಕಾರಿ ಡಾ. ಹರೀಶಕುಮಾರ ಅವರು ಕುಮಟಾ ಉಪವಿಭಾಗಾಧಿಕಾರಿಗಳಿಗೆ ಆದೇಶ ಹೊರಡಿಸಿ ಸೂಚಿಸಿದ್ದಾರೆ.

ಪಾರದರ್ಶಕತೆ ಸೂಕ್ತ ಪರಿಹಾರದ ಹಕ್ಕು ಮತ್ತು ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ ಅಡಿಯಲ್ಲಿ ಭೂಸ್ವಾಧೀನಕ್ಕೆ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಭೂ ಸ್ವಾಧೀನ ಪಡಿಸಿಕೊಳ್ಳುವ ಅಧಿಕಾರವನ್ನು ಚಲಾಯಿಸಲು ಕುಮಟಾ ಸಹಾಯಕರು ಹಾಗೂ ಭೂಸ್ವಾಧೀನಾಧಿಕಾರಿಗಳಿಗೆ ಅಧಿಕೃತವಾಗಿ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

admin

Recent Posts

ರೈತನ ಬಾಳಲ್ಲಿ ಜೀವಜಲ ತುಂಬಿದ ರಿಂಗ್ ಮಾಸ್ಟರ್ ನರೇಗಾ

ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…

3 months ago

PMAY: ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಅರ್ಜಿ

PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…

1 year ago

ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…

2 years ago

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

2 years ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

3 years ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

3 years ago