Categories: Agriculture

ಕೃಷಿ ಜಮೀನು ಖರೀದಿಗೆ ಶೇ. 50 ರಷ್ಟು ಸಬ್ಸಿಡಿ ಸಾಲ

ಜಮೀನು ಖರೀದಿಸಿ ಕೃಷಿ ಮಾಡಬೇಕು ಎನ್ನುವವರಿಗಾಗಿ ಸಬ್ಸಿಡಿ ಸಾಲ ಯೋಜನೆಯೊಂದು ಕರ್ನಾಟಕದಲ್ಲಿ ಜಾರಿಯಲ್ಲಿದೆ. ಬಹುತೇಕರಿಗೆ ಯೋಜನೆಯ ಅರಿವಿಲ್ಲದೆ ಅರ್ಜಿ ಸಲ್ಲಿಕೆಯೇ ಕಡಿಮೆಯಾಗುತ್ತಿವೆ. ಈ ಯೋಜನೆಯಡಿ ಶೇ. 50 ರಷ್ಟು ಸಬ್ಸಿಡಿ ಸಾಲದೊಂದಿಗೆ ಎರಡು ಎಕರೆ ವರೆಗೆ ಜಮೀನು ಖರೀದಿಸಬಹುದು.

ಸರ್ಕಾರದ ಆದೇಶದ ಪ್ರಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತುರಾಮನಗರ ಜಿಲ್ಲೆಯಲ್ಲಿ ಕೃಷಿ ಜಮೀನು ಖರೀದಿಗೆ ಗರಿಷ್ಠ 20 ಲಕ್ಷ ರೂ. ವರೆಗೆ ನೆರವು ನೀಡಲಾಗುತ್ತದೆ. ಅದರಲ್ಲಿ ಶೇ. 50 ರಷ್ಟು ಸಬ್ಸಿಡಿ, ಉಳಿದ ಶೇ. 50 ರಷ್ಟು ಹಣವನ್ನು ಸಾಲದ ರೂಪದಲ್ಲಿ ಕೊಡಿಸಲಾಗುತ್ತದೆ.

ಉಳಿದ ಜಿಲ್ಲೆಗಳಲ್ಲಿ ಗರಿಷ್ಠ 15 ಲಕ್ಷ ರೂ.ವರೆಗೆ ನೆರವು ನೀಡಲಾಗುತ್ತದೆ. ಅದರಲ್ಲಿ ಶೇ. 50 ರಷ್ಟು ಸಬ್ಸಿಡಿ, ಉಳಿದ ಶೇ. 50 ರಷ್ಟು ಹಣವನ್ನು ಸಾಲದ ರೂಪದಲ್ಲಿ ಕೊಡಿಸಲಾಗುತ್ತದೆ. ಈ ನೆರವಿನಲ್ಲಿ ಕನಿಷ್ಠ 2.00 ಎಕರೆ ಖುಷ್ಕಿ ಅಥವಾ ಕನಿಷ್ಠ 1.00 ಎಕರೆ ತರಿ ಅಥವಾ ½ ಎಕರೆ (20 ಗುಂಟೆ) ಕಡಿಮೆಯಿಲ್ಲದಂತೆ ಭಾಗಾಯ್ತು ಜಮೀನನ್ನು ಖರೀದಿಸಿ ಕೊಡಲಾಗುತ್ತದೆ.

ಈ ಯೋಜನೆಗೆ ಭೂ ಒಡೆತನ ಯೋಜನೆ ಹೆಸರಿಸಲಾಗಿದೆ. ಯೋಜನೆಯಡಿ ಫಲಾನುಭವಿ ವಾಸಿಸುತ್ತಿರುವ ಸ್ಥಳದಿಂದ ಗರಿಷ್ಠ 10 ಕಿ.ಮೀ ವ್ಯಾಪ್ತಿಯೊಳಗೆ ಜಮೀನನ್ನು ಫಲಾನುಭವಿಗೆ ಖರೀದಿಸಿ ಕೊಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ದರ ನಿಗದಿಪಡಿಸುತ್ತದೆ.

ಇದನ್ನೂ ಓದಿ: ಕೃಷಿ ಸ್ಟಾರ್ಟಪ್: ರೈತರ ಉತ್ಪನ್ನಗಳಿಗೆ ಭರ್ಜರಿ ಡಿಮಾಂಡ್

ಭೂ ಒಡೆತನ ಯೋಜನೆಯಡಿ ಅವಧಿಸಾಲವನ್ನು ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಮತ್ತು ಅಭಿವೃದ್ದಿ ನಿಗಮದಿಂದ ಮತ್ತು ಸಹಾಯಧನವನ್ನು ವಿಶೇಷ ಕೇಂದ್ರಿಯ ನೆರವು ಯೋಜನೆ ಅನುದಾನ ದಿಂದ ಭರಿಸಲಾಗುತ್ತಿದೆ. ಪರಿಶಿಷ್ಟ ಜಾತಿಯ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಸೌಲಭ್ಯವನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: ರೈತರ ಬೆಳೆ ರೈತರಿಂದಲೇ ಸಮೀಕ್ಷೆ: ಆ್ಯಪ್ ಬಿಡುಗಡೆ

ಸೌಲಭ್ಯ ಪಡೆಯುವುದು ಹೇಗೆ?

ಯೋಜನೆಯಡಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಪ್ರತಿ ವರ್ಷ ವಿಧಾನಸಭಾ ಕ್ಷೇತ್ರವಾರು ಪರಿಶಿಷ್ಟ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಗುರಿ ನಿಗದಿಪಡಿಸಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ.

ಇದನ್ನೂ ಓದಿ: ಈ ತಂತ್ರ ಬಳಸಿದರೆ ಕಬ್ಬಿಗೆ ಬಿಳಿನೊಣ ಕಾಡುವುದೇ ಇಲ್ಲ

ಹಾಗಾಗಿ ಶೇ. 50 ರಷ್ಟು ಸಬ್ಸಿಡಿ ಸಹಾಯಧನದೊಂದಿಗೆ ಕೃಷಿ ಜಮೀನು ಖರೀದಿಸಿ ಕೃಷಿ ಮಾಡಬೇಕು ಎನ್ನುವವರು ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಈ ಯೋಜನೆ ಪರಿಶಿಷ್ಟ ಜಾತಿಯ ಭೂರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಮಾತ್ರ.

admin

View Comments

Recent Posts

ರೈತನ ಬಾಳಲ್ಲಿ ಜೀವಜಲ ತುಂಬಿದ ರಿಂಗ್ ಮಾಸ್ಟರ್ ನರೇಗಾ

ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…

3 months ago

PMAY: ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಅರ್ಜಿ

PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…

1 year ago

ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…

2 years ago

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

2 years ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

3 years ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

3 years ago