Categories: Agriculture

ಈ ಬೀಜದಿಂದ ಭೂಮಿಯೇ ಬಂಜರಾಗಬಹುದು

ಚೀನಾ ದೇಶವು ಅನೇಕ ದೇಶಗಳಿಗೆ ನಿಗೂಢ/ ರಹಸ್ಯವಾಗಿ ಬೀತ್ತನೆ ಬೀಜಗಳನ್ನು ರಫ್ತು ಮಾಡುತ್ತಿದ್ದು, ರೈತರು ಇಂತಹ ಬಿತ್ತನೆ ಬೀಜದ ಪೊಟ್ಟಣಗಳು ತಮ್ಮ ಮನೆ ಬಾಗಿಲಿಗೆ ಬಂದಲ್ಲಿ ಅದನ್ನು ಸ್ವೀಕರಿಸದೇ ವಾಪಸ್ಸು ಕಳುಹಿಸಬೇಕು.

ಒಂದು ವೇಳೆ ರೈತರು ಬಿತ್ತನೆ ಬೀಜವನ್ನು ಸ್ವೀಕರಿಸಿದ್ದಲ್ಲಿ ಅದನ್ನು ಪೊಟ್ಟಣ ಸಮೇತ ಸುಟ್ಟು ಹಾಕಬೇಕು. ಇಲ್ಲವೇ ತಮ್ಮ ಸಮೀಪದ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕೆಂದು ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸೂಗೂರ ರೈತರಲ್ಲಿ ಮನವಿ ಮಾಡಿದ್ದಾರೆ.

ಇಂತಹ ಅನಾಮಧೇಯ ಬಿತ್ತನೆ ಬೀಜದ ಪೊಟ್ಟಣಗಳು ರೈತರ ಮನೆ ಬಾಗಿಲಿಗೆ ಬಂದಾಗ ರೈತರು ಅದನ್ನು ಸ್ವೀಕರಿಸಿ ಬೀಜಗಳನ್ನು ಬಿತ್ತನೆ ಮಾಡಿದ್ದಲ್ಲಿ ಕೃಷಿ ಭೂಮಿಯು ಸಂಪೂರ್ಣ ನಾಶವಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಈ ಬೀಜಗಳ ಬಳಕೆಯಿಂದ ಕೃಷಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿ ಕ್ರಮೇಣ ಭೂಮಿಯು ಬಂಜರಾಗುವ ಸಾಧ್ಯತೆ ಇದೆ. ಆದ್ದರಿಂದ ಇಂತಹ ಬಿತ್ತನೆ ಬೀಜದ ಪೊಟ್ಟಣಗಳು ರೈತರು ಸ್ವೀಕರಿಸದೇ ವಾಪಸ್ಸು ಕಳುಹಿಸಬೇಕು.

ವಿವಿಧ ತಳಿಗಳ ಬಿತ್ತನೆ ಬೀಜದ ಈ ಪೊಟ್ಟಣಗಳನ್ನು ಯಾರು ಕಳುಹಿಸುತ್ತಾರೆ, ಇವು ಎಲ್ಲಿಂದ ಬರುತ್ತವೆ ಎಂಬ ವಿವರಗಳು ಇರುವುದಿಲ್ಲ. ಅದು ತೀವ್ರ ಆಚ್ಚರಿಗೂ ಕಾರಣವಾಗಿದೆ.

ಈಗಾಗಲೇ ಇಂಗ್ಲೇಡ್, ಕೆನಡಾದಲ್ಲಿ ಅನೇಕ ರೈತರಿಗೆ ಇಂತಹ ಬೀಜಗಳು ಸರಬರಾಜು ಆಗಿವೆ. ಅಮೇರಿಕಾದ ೨೮ ರಾಜ್ಯಗಳಲ್ಲಿ ೧೪ ಜಾತಿಯ ಹೂವಿನ ತಳಿಗಳು ಪತ್ತೆ ಮಾಡಲಾಗಿದೆ.

ಈ ಬೀಜಗಳು ಕೀಟಗಳು ಮತ್ತು ರೋಗಾಣುಗಳಿಂದ ಕೂಡಿದ್ದು, ರೈತರು ಅವುಗಳು ಬಿತ್ತನೆ ಮಾಡಿದರೆ ಬೆಳೆಯು ಬೆಳೆದ ಒಂದು ತಿಂಗಳಲ್ಲಿ ಕೀಟ ಮತ್ತು ರೋಗದ ಬಾಧೆಯಿಂದ ಸಂಪೂರ್ಣ ಬೆಳೆ ನಾಶವಾಗುತ್ತದೆ.

ಆದ್ದರಿಂದ ರೈತರು ಪ್ರಮಾಣಿಕೃತ ಹಾಗೂ ನಂಬಿಕೆಯ ಬೀಜ ಮಾರಾಟಗಾರರಿಂದ ಮಾತ್ರ ಬಿತ್ತನೆ ಬೀಜ ಖರೀದಿ ಮಾಡಿ ಅದರ ರಸೀದಿ ಪಡೆದು ಬೀಜಗಳನ್ನು ಬಿತ್ತನೆ ಮಾಡಬೇಕೆಂದು ಜಂಟಿ ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ.

admin

View Comments

Recent Posts

ರೈತನ ಬಾಳಲ್ಲಿ ಜೀವಜಲ ತುಂಬಿದ ರಿಂಗ್ ಮಾಸ್ಟರ್ ನರೇಗಾ

ಉತ್ತರ ಕನ್ನಡಅಂಗೈ ಅಗಲದ ಭೂಮಿಯಲ್ಲಿ ಬೆರಳ ಗಾತ್ರ ನೀರುಕ್ಕುವ ಕೊಳವೆ ಬಾವಿ, ಅದನ್ನೇ ನಂಬಿ ನೆಟ್ಟ ಅಡಿಕೆ ಸಸಿ, ಸತತ…

4 months ago

PMAY: ಪ್ರಧಾನ ಮಂತ್ರಿ ಆವಾಸ ಯೋಜನೆಗೆ ಅರ್ಜಿ

PMAYG ಪ್ರಧಾನ ಮಂತ್ರಿ ಆವಾಸ ಯೋಜನೆ. ಸರಕಾರಿ ಯೋಜನೆಯಡಿ ಮನೆ ಪಡೆಯಬೇಕು. ಸ್ವಂತ ಮನೆ House ಹೊಂದಬೇಕು ಎನ್ನುವವರಿಗೆ ಪ್ರಧಾನಿ…

1 year ago

ಬ್ಯೂಟಿ ಪಾರ್ಲರ್ ನಿರ್ವಹಣೆ ಉಚಿತ ತರಬೇತಿ

ಗ್ರಾಮೀಣಾಭಿವೃದ್ಧಿ ಹಾಗೂ ಸ್ವ ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್ ಸಂಸ್ಥೆ) ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾವಂತ…

2 years ago

ಕತ್ತೆ ಸಾಕಾಣಿಕೆಯಲ್ಲಿ ದುಪ್ಪಟ್ಟು ಆದಾಯ

ಕತ್ತೆಗೂ ಈಗ ಬೇಡಿಕೆ ಬಂದಿದೆ. ಕತ್ತೆ ಎಂದು ಬೈಯುವಾಗ ಒಮ್ಮೆ ಅಲೋಚಿಸಬೇಕಿದೆ. ಕೃಷಿಯಲ್ಲಿ ನಡೆಯುತ್ತಿರುವ ಪ್ರಯೋಗಗಳು ಹೊಸ ಅವಕಾಶಗಳನ್ನು ಸೃಷ್ಟಿ…

2 years ago

ಉದ್ಯಮ ಶುರುಮಾಡಲು ಹೆಣ್ಮಕ್ಕಳಿಗೆ ಸಿಗುತ್ತೆ ₹ 3 ಲಕ್ಷ ಬಡ್ಡಿ ರಹಿತ ಸಾಲ: ಇಂದೆ ಅರ್ಜಿ ಸಲ್ಲಿಸಿ

ಹೆಣ್ಣುಮಕ್ಕಳಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ 'ಉದ್ಯೋಗಿನಿ ಯೋಜನೆ' (ಉದ್ಯೋಗಿನಿ ಸ್ಕೀಮ್)…

3 years ago

KSRTC: FDA, SDA, ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವು, ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ…

3 years ago